ವಿಷಯಕ್ಕೆ ಹೋಗಿ

ಮೊದಲ ಮಳೆ!!!

ಬಿರು ಬೇಸಿಗೆಯಲ್ಲಿ ನಮ್ಮ ದೇಶವನ್ನೊಮ್ಮೆ ನೆನೆಸಿಕೊಳ್ಳಿ, ಭೂಮಿಯಲ್ಲಿ ಇದ್ದ ನೀರೆಲ್ಲ ಆವಿಯಾಗಿ ವಾತಾವರಣದಲ್ಲಿ ಸೇರಿಕೊಂಡಿರುತ್ತದೆ.
ಕುಡಿಯಲು ನೀರಿಲ್ಲದೆ ಸಕಲ ಜೀವಚರಗಳು ತತ್ತರಿಸುತ್ತಿದ್ದರೆ, ಸಣ್ಣ ಪುಟ್ಟ ಹುಲ್ಲು, ಗಿಡಗಳಂತು ಸಂಪೂರ್ಣವಾಗಿ ಒಣಗಿ ಸುರುಟಿರುತ್ತದೆ. ಎಲ್ಲೆಲ್ಲೂ ನೀರಿಗಾಗಿ ಆಹಾಕಾರ. ಹೀಗೆ ಬೇಸಿಗೆಯಲ್ಲಿ ದಿನ ದೂಡುವುದೆ ದುಸ್ತರ.

ಅಂತಹ ಒಂದು ಬೇಸಿಗೆಯ ಒಂದು ರಾತ್ರಿ, ಇದ್ದಕ್ಕಿದ್ದಂತೆಯೇ ಆಕಾಶದಲ್ಲಿ ಮೋಡಗಳು ಕೂಡಿಕೊಳ್ಳಲು ಆರಂಭಿಸುತ್ತದೆ. ನೋಡನೋಡುತ್ತಿದ್ದಂತೆ ಗಡುಗು ಮಿಂಚುಗಳೊಂದಿಗೆ ಮೊದಲ ಮಳೆ ಹನಿ ಭೂಮಿಗೆ ಬೀಳುತ್ತದೆ. ಮಣ್ಣಿನ ಸುವಾಸನೆ ಮೂಗಿಗೆ ಬಡಿಯುತ್ತದೆ. ವಾತಾವರಣ ತಣ್ಣಗಾಗುತ್ತದೆ. ಪರಿತಪಿಸುತ್ತಿದ್ದ ಪ್ರತಿಯೊಂದು ಜೀವಿಗೂ ಹೊಸ ಚೈತನ್ಯ ಮೂಡುತ್ತದೆ. ಜೀವನಚಕ್ರ ಮುಂದುವರಿಯುತ್ತದೆ.

ಅಂತಹ ಮೊದಲ ಮಳೆಯ ಮಾರನೆಯ ಬೆಳಿಗ್ಗೆ ನಮ್ಮ ಕೈತೋಟದಲ್ಲಿ ಕಂಡು ಬಂದ ದೃಶ್ಯಗಳು ಇವು


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಕ್ಕೆ - ಪ್ರಕೃತಿ ಸಂಭ್ರಮಿಸುವ ಪರಿ

ಏಪ್ರಿಲ್-ಮೇ ತಿಂಗಳು ಬಹುತೇಕ ಮರಗಳು ಹೊಸದಾಗಿ‌ ಚಿಗುರಿ ಪ್ರಕೃತಿ ಸಂಭ್ರಮಿಸುವ ಸಮಯ. ವಸಂತಕಾಲದ ಬೆಳಗಿನ ಹೊತ್ತು ಮರಗಳಲ್ಲಿ ತೂರಿಬರುವ ಸೂರ್ಯನ ಕಿರಣಗಳು ಬಣ್ಣ ಬಣ್ಣದ ಚಿಗುರೆಲೆ, ಹೂಗಳ ಮೇಲೆ ಬಿದ್ದು ಇಡೀ ವಾತಾವರಣವೇ ಪ್ರಜ್ವಲಿಸುತ್ತದೆ. ಮರಗಳಲ್ಲಿ ಎಲೆಗಳ ಚಿಗುರು ಕೆಂಪು, ತಿಳಿಹಸಿರು ಹೀಗೆ‌ ವಿವಿಧ ಬಣ್ಣದ್ದಾದರೆ, 'ಕಾಡಿನ ಬೆಂಕಿ' ಎಂದೇ ಕರೆಯಲಾಗುವ ಮುತ್ತುಗ, ಬೂರುಗ, ಮಂದಾರ ಮರಗಳಲ್ಲಿ ಅರಳುವ ಹೂಗಳ ಸೊಗಸು. 'ಚಿನ್ನದ ಮಳೆ' ಎಂದು ಹೆಸರಿಸುವ ಕಕ್ಕೆಯ ಮರದ ಹೂವಿನದ್ದೇ ಇನ್ನೊಂದು‌ ಸೊಗಸು. ಕಕ್ಕೆ ಮರದ ಮೂಲ ಭಾರತ ಉಪಖಂಡ. ನೆರೆಯ ಶ್ರೀಲಂಕಾ, ಮ್ಯಾನ್ಮಾರ್, ಪಾಕಿಸ್ತಾನ, ಥೈಲ್ಯಾಂಡ್ ದೇಶಗಳಲ್ಲಿಯೂ ಬೆಳೆಯುತ್ತದೆ. ಒಣ ಎಲೆಯುದುರುವ ಮತ್ತು ತೇವಾಂಶಭರಿತ ಎಲೆಯುದುರುವ ಪರಿಸರದಲ್ಲಿ‌ ಬೆಳೆಯುವ ಕಕ್ಕೆ ಮರ ಥೈಲ್ಯಾಂಡ್ ದೇಶದ ರಾಷ್ಟ್ರೀಯ ಮರ ಮತ್ತು ಅದರ ಹೂವು ರಾಷ್ಟ್ರೀಯ ಪುಷ್ಪ. ನಮ್ಮ ದೇಶದ ಕೇರಳ ರಾಜ್ಯದ ರಾಜ್ಯ ಪುಷ್ಪವೂ ಕಕ್ಕೆ. Cassia fistula ಕಕ್ಕೆ ಮರದ ವೈಜ್ಞಾನಿಕ ಹೆಸರು. ಸುಮಾರು 15-20 ಮೀಟರ್ ಎತ್ತರಕ್ಕೆ ಬೆಳೆಯುವ ಸಾಮಾನ್ಯ ಗಾತ್ರದ ಮರ. ಇದರ ಎಲೆಗಳು ಋತುಮಾನಕ್ಕೆ‌ ತಕ್ಕಂತೆ ಉದುರುವ (deciduous) ವರ್ಗಕ್ಕೆ ಸೇರಿದೆ. ಇದರ ಹಳದಿ ಹೂಗಳು 'ಪೆಂಡ್ಯೂಲಮ್'ನಂತೆ ಇಳಿಬಿಟ್ಟು, 4-7 ಸೆಂಟಿಮೀಟರ್ ವ್ಯಾಸವಿರುತ್ತದೆ. ಸಮಾನ ಗಾತ್ರದ 5 ಪಕಳೆಗಳಿರುತ್ತದೆ. ಇದು ದ್ವಿದಳ ಬೀಜಬ...

ಆಲೆ ಅಥವಾ ಬೆಪ್ಪಾಲೆ

ಹೂವುಗಳು ಬಾಲ್ಯದಲ್ಲಿ ನಮ್ಮ ಕನ್ನಡ ಪಠ್ಯಪುಸ್ತಕದಲ್ಲಿ ಚನ್ನಪಟ್ಟಣದ ಗೊಂಬೆಗಳ ಕುರಿತಾದ ಒಂದು ಪದ್ಯವಿತ್ತು‌ ಅದನ್ನು ಓದಿದ್ದ ನಮಗೆ ಅಂತಹ ಗೊಂಬೆಗಳನ್ನು ಕೊಳ್ಳಬೇಕೆಂಬ ಬಯಕೆ ಮೂಡದೆ ಇರಲಿಲ್ಲ. ಮುಂದೊಮ್ಮೆ ಮೈಸೂರಿಗೆ ಹೋದಾಗ ಚನ್ನಪಟ್ಟಣದಲ್ಲಿ ಗೊಂಬೆ ಮತ್ತು ಆಟಿಕೆಗಳನ್ನು ಕೊಂಡ ನೆನಪು. ಚನ್ನಪಟ್ಟಣದ ಗೊಂಬೆಗಳು ಜಗದ್ವಿಖ್ಯಾತವಾಗಿವೆ.

ಅತ್ತಿ

ನಾನು ಶಾಲೆಯಲ್ಲಿ ಓದುತ್ತಿದ್ದಾಗ ನಮ್ಮ ಶಾಲೆಯ ಮುಂದೆ ದೊಡ್ಡ ಮರವೊಂದಿತ್ತು. ಆ ಮರದ ಕೆಳಗೆ ಅದರ ಹಣ್ಣುಗಳು ಸದಾ ಬಿದ್ದಿರುತ್ತಿದ್ದವು. ಒಳ್ಳೆಯ ಪರಿಮಳವಿದ್ದ ಆ ಹಣ್ಣನ್ನು ತಿನ್ನಬಹುದೆ ಎಂಬ ಕುತೂಹಲದಿಂದ ಬಿಡಿಸಿದರೆ ಅದರ ತುಂಬಾ ಹುಳುಗಳು ಇದ್ದದ್ದು ನೋಡಿ ನಿರಾಸೆ ಉಂಟಾಯಿತು. ಕೆಳಗೆ ಬಿದ್ದ ಹಣ್ಣಾದ್ದರಿಂದ ಹುಳು ಹಿಡಿದಿದೆ ಮರದಿಂದ ನೇರವಾಗಿ ಕಿತ್ತ ಹಣ್ಣನ್ನು ತಿನ್ನಬಹುದು ಎಂಬ ದೂರದಾಸೆ ಇನ್ನೂ ಇತ್ತು ಆದರೆ ಕೈಗೆಟುಕುವ ಅಂತರದಲ್ಲಿ ಹಣ್ಣುಗಳು ಇರಲಿಲ್ಲ.