ವಿಷಯಕ್ಕೆ ಹೋಗಿ

ಟಿಟ್ಟಿಭನ ಕಥೆ:



ಬಂಡೀಪುರದಲ್ಲಿ ಒಂದು ದಿನ Red Wattled Lapwing (ಕನ್ನಡದಲ್ಲಿ ಟಿಟ್ಟಿಭ) ಗೂಡು ನೋಡ್ದೆ. ಗೂಡು ಅಂದ್ರೆ ನಾವು ದಿನ ಓಡಾಡೋ ಜೀಪ್ ರೋಡಿನ ಒಂದು ಬದಿಯಲ್ಲಿ ಸ್ವಲ್ಪ ಹಳ್ಳ ಇರೋ ಕಡೆ ನಾಲ್ಕು ಮೊಟ್ಟೆ ಇಟ್ಟಿತ್ತು.
ನಾನು ಜೀಪ್ ನಿಲ್ಸಿ ಅದರ ಕಡೆ ನಡ್ಕೊಂಡು ಹೋದೆ, ಟಿಟ್ಟಿಭ ಯಾವ ಸದ್ದಿಲ್ದೆ ಎದ್ದು ಪಕ್ಕದಲ್ಲಿದ್ದ ಪೊದೆಯೊಳಗೆ ಓಡಿ ಮರೆಯಾಯ್ತು. ನಾನು ಮೊಟ್ಟೆಗಳ photo ತೆಕ್ಕೊಂಡು ಜೀಪ್ ಹತ್ತಿ ಬಂದೆ. ಇದಾಗಿ ಒಂದು ವಾರ ನಾನು ಆ ಕಡೆ ಹೋಗ್ಲಿಲ್ಲ. ಒಂದು ವಾರ ಬಿಟ್ಟು ಮತ್ತೆ ಆ ಕಡೆ ಹೋಗ್ಬೆಕಾಯ್ತು. ಆವಾಗ ಮತ್ತೆ ಆ ಗೂಡಿನ ಹತ್ರ ಜೀಪ್ ನಿಲ್ಸಿ ನೋಡ್ದೆ, ನಾಲ್ಕು ಮೊಟ್ಟೆಯಲ್ಲಿ ಮೂರು ಮರಿಯಾಗಿದ್ವು. ಈ ಬಾರಿ ತಾಯಿ ಹಕ್ಕಿ ಹಿಂದಿನ ತರಹ ಓಡಿ ಮರೆಯಾಗ್ಲಿಲ್ಲ, ಬದಲಿಗೆ ಸ್ವಲ್ಪ ದೂರ ನಿಂತು ಜೋರಾದ ದನಿಯಲ್ಲಿ ಕೂಗತೊಡಗಿತು. ಗೂಡಲ್ಲಿ ಮುದುರಿ ಕುಳಿತಿದ್ದ ಮರಿಗಳು ಎದ್ದು ಓಡ್ಲಿಕ್ಕೆ ಹೋಗಿ ಚೆಲ್ಲಾಪಿಲ್ಲಿಯಾದ್ವು. ತಾಯಿ ಹಕ್ಕಿ ಮೊಟ್ಟೆಯಿದ್ದಾಗ ಯಾಕೆ ಗಲಾಟೆ ಮಾಡ್ಲಿಲ್ಲ, ಮೊಟ್ಟೆಗಳು ಮರಿಯಾದ್ಮೆಲೆ ಯಾಕೆ ಇಷ್ಟೊಂದು ಗದ್ದಲ ಮಾಡ್ತಿದೆ ಅಂದ್ಕೊಂಡು ಆಶ್ಚರ್ಯದಿಂದ ಜೀಪ್ ಹತ್ತಿ ಬಂದೆ.

 ಸ್ವಲ್ಪ ಹಳ್ಳ ಇರೋ ಕಡೆ ನಾಲ್ಕು ಮೊಟ್ಟೆ ಇಟ್ಟಿತ್ತು...

 ನಾಲ್ಕು ಮೊಟ್ಟೆಯಲ್ಲಿ ಮೂರು ಮರಿಯಾಗಿದ್ವು...

ಕುಳಿತಿದ್ದ ಮರಿಗಳು ಎದ್ದು ಓಡ್ಲಿಕ್ಕೆ ಹೋಗಿ ಚೆಲ್ಲಾಪಿಲ್ಲಿಯಾದ್ವು...

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಕ್ಕೆ - ಪ್ರಕೃತಿ ಸಂಭ್ರಮಿಸುವ ಪರಿ

ಏಪ್ರಿಲ್-ಮೇ ತಿಂಗಳು ಬಹುತೇಕ ಮರಗಳು ಹೊಸದಾಗಿ‌ ಚಿಗುರಿ ಪ್ರಕೃತಿ ಸಂಭ್ರಮಿಸುವ ಸಮಯ. ವಸಂತಕಾಲದ ಬೆಳಗಿನ ಹೊತ್ತು ಮರಗಳಲ್ಲಿ ತೂರಿಬರುವ ಸೂರ್ಯನ ಕಿರಣಗಳು ಬಣ್ಣ ಬಣ್ಣದ ಚಿಗುರೆಲೆ, ಹೂಗಳ ಮೇಲೆ ಬಿದ್ದು ಇಡೀ ವಾತಾವರಣವೇ ಪ್ರಜ್ವಲಿಸುತ್ತದೆ. ಮರಗಳಲ್ಲಿ ಎಲೆಗಳ ಚಿಗುರು ಕೆಂಪು, ತಿಳಿಹಸಿರು ಹೀಗೆ‌ ವಿವಿಧ ಬಣ್ಣದ್ದಾದರೆ, 'ಕಾಡಿನ ಬೆಂಕಿ' ಎಂದೇ ಕರೆಯಲಾಗುವ ಮುತ್ತುಗ, ಬೂರುಗ, ಮಂದಾರ ಮರಗಳಲ್ಲಿ ಅರಳುವ ಹೂಗಳ ಸೊಗಸು. 'ಚಿನ್ನದ ಮಳೆ' ಎಂದು ಹೆಸರಿಸುವ ಕಕ್ಕೆಯ ಮರದ ಹೂವಿನದ್ದೇ ಇನ್ನೊಂದು‌ ಸೊಗಸು. ಕಕ್ಕೆ ಮರದ ಮೂಲ ಭಾರತ ಉಪಖಂಡ. ನೆರೆಯ ಶ್ರೀಲಂಕಾ, ಮ್ಯಾನ್ಮಾರ್, ಪಾಕಿಸ್ತಾನ, ಥೈಲ್ಯಾಂಡ್ ದೇಶಗಳಲ್ಲಿಯೂ ಬೆಳೆಯುತ್ತದೆ. ಒಣ ಎಲೆಯುದುರುವ ಮತ್ತು ತೇವಾಂಶಭರಿತ ಎಲೆಯುದುರುವ ಪರಿಸರದಲ್ಲಿ‌ ಬೆಳೆಯುವ ಕಕ್ಕೆ ಮರ ಥೈಲ್ಯಾಂಡ್ ದೇಶದ ರಾಷ್ಟ್ರೀಯ ಮರ ಮತ್ತು ಅದರ ಹೂವು ರಾಷ್ಟ್ರೀಯ ಪುಷ್ಪ. ನಮ್ಮ ದೇಶದ ಕೇರಳ ರಾಜ್ಯದ ರಾಜ್ಯ ಪುಷ್ಪವೂ ಕಕ್ಕೆ. Cassia fistula ಕಕ್ಕೆ ಮರದ ವೈಜ್ಞಾನಿಕ ಹೆಸರು. ಸುಮಾರು 15-20 ಮೀಟರ್ ಎತ್ತರಕ್ಕೆ ಬೆಳೆಯುವ ಸಾಮಾನ್ಯ ಗಾತ್ರದ ಮರ. ಇದರ ಎಲೆಗಳು ಋತುಮಾನಕ್ಕೆ‌ ತಕ್ಕಂತೆ ಉದುರುವ (deciduous) ವರ್ಗಕ್ಕೆ ಸೇರಿದೆ. ಇದರ ಹಳದಿ ಹೂಗಳು 'ಪೆಂಡ್ಯೂಲಮ್'ನಂತೆ ಇಳಿಬಿಟ್ಟು, 4-7 ಸೆಂಟಿಮೀಟರ್ ವ್ಯಾಸವಿರುತ್ತದೆ. ಸಮಾನ ಗಾತ್ರದ 5 ಪಕಳೆಗಳಿರುತ್ತದೆ. ಇದು ದ್ವಿದಳ ಬೀಜಬ...

ಅತ್ತಿ

ನಾನು ಶಾಲೆಯಲ್ಲಿ ಓದುತ್ತಿದ್ದಾಗ ನಮ್ಮ ಶಾಲೆಯ ಮುಂದೆ ದೊಡ್ಡ ಮರವೊಂದಿತ್ತು. ಆ ಮರದ ಕೆಳಗೆ ಅದರ ಹಣ್ಣುಗಳು ಸದಾ ಬಿದ್ದಿರುತ್ತಿದ್ದವು. ಒಳ್ಳೆಯ ಪರಿಮಳವಿದ್ದ ಆ ಹಣ್ಣನ್ನು ತಿನ್ನಬಹುದೆ ಎಂಬ ಕುತೂಹಲದಿಂದ ಬಿಡಿಸಿದರೆ ಅದರ ತುಂಬಾ ಹುಳುಗಳು ಇದ್ದದ್ದು ನೋಡಿ ನಿರಾಸೆ ಉಂಟಾಯಿತು. ಕೆಳಗೆ ಬಿದ್ದ ಹಣ್ಣಾದ್ದರಿಂದ ಹುಳು ಹಿಡಿದಿದೆ ಮರದಿಂದ ನೇರವಾಗಿ ಕಿತ್ತ ಹಣ್ಣನ್ನು ತಿನ್ನಬಹುದು ಎಂಬ ದೂರದಾಸೆ ಇನ್ನೂ ಇತ್ತು ಆದರೆ ಕೈಗೆಟುಕುವ ಅಂತರದಲ್ಲಿ ಹಣ್ಣುಗಳು ಇರಲಿಲ್ಲ.

ಮಕರ ಸಂಕ್ರಾಂತಿ ಮತ್ತು ಉತ್ತರಾಯಣ

ಸಂಕ್ರಾಂತಿ ಹಬ್ಬವನ್ನು ಭಾರತದ ಬೇರೆ ಭಾಗಗಳಲ್ಲಿ ಬೇರೆ ಹೆಸರಿನಲ್ಲಿ ಆಚರಿಸುತ್ತಾರೆ . ಸಂಕ್ರಾಂತಿಯನ್ನು ಸಾಮಾನ್ಯವಾಗಿ ಉತ್ತರಾಯಣ ಪುಣ್ಯಕಾಲವೆಂದೂ ಆಚರಿಸುತ್ತಾರೆ . ಸಂಕ್ರಾಂತಿ ಮತ್ತು ಉತ್ತರಾಯಣ ನಡುವಿನ ಸಂಬಂಧವೇನು ? ಇದನ್ನು ತಿಳಿದುಕೊಳ್ಳಬೇಕಾದರೆ ಸಂಕ್ರಾಂತಿ ಮತ್ತು ಉತ್ತರಾಯಣ ಎಂದರೇನು ತಿಳಿಯೋಣ . ಮಕರ ಸಂಕ್ರಾಂತಿ : ಭೂಮಿಯು ಸೂರ್ಯನನ್ನು ಸುತ್ತುವ ಸಮತಲವನ್ನು ಅಂತರಿಕ್ಷಕ್ಕೆ ವಿಸ್ತರಿಸಿ ಆ ಕಾಲ್ಪನಿಕ ವೃತ್ತಕ್ಕೆ ಕ್ರಾಂತಿವೃತ್ತ (Ecliptc) ಎನ್ನಲಾಗಿದೆ . ಕ್ರಾಂತಿವೃತ್ತವನ್ನು ಸರಿಯಾಗಿ 12 ಭಾಗಗಳನ್ನಾಗಿ ವಿಭಜಿಸಿ , ಆ ಭಾಗಗಳನ್ನು ಕ್ರಮವಾಗಿ ಮೇಷರಾಶಿ , ವೃಷಭರಾಶಿ ,.. ಮೀನರಾಶಿಗಳೆಂದು ಕರೆಯುತ್ತೇವೆ . ಸೂರ್ಯನು ಒಂದೊಂದು ರಾಶಿಯನ್ನು ಪ್ರವೇಶಿಸುವ ಪರ್ವಕಾಲಕ್ಕೆ ಸಂಕ್ರಮಣ ಅಥವಾ ಸಂಕ್ರಾಂತಿ ಎಂದು ಹೆಸರು . ಈ 12 ರಾಶಿಗಳ ಗಣನೆಯು ಕ್ರಾಂತಿವೃತ್ತದಲ್ಲಿ ಬಿಂದುವೊಂದನ್ನು ಸ್ಥಿರವಾದ ಸ್ಥಾನವೆಂದು ಪರಿಗಣಿಸಿ , ಆ ಬಿಂದುವಿನಿಂದ ಆರಂಭಿಸಿ , ಭಾರತೀಯ ಸೌರಮಾನ ಪದ್ಧತಿಯಲ್ಲಿ ಸೂರ್ಯನು ಮೇಷರಾಶಿಯನ್ನು ಪ್ರವೇಶಮಾಡಿದ ಅಂದರೆ ಮೇಷ ಸಂಕ್ರಮಣದ ಸಮಯದಿಂದ ಸೌರವರ್ಷವು ಪ್ರಾರಂಭವಾಗುತ್ತದೆ . ಇದೇ ' ಸೌರಮಾನ ಯುಗಾದಿ ' ಎಂದು ಆಚರಿಸಲ್ಪಡುತ್ತದೆ . ಈ ಪದ್ಧತಿಯು ಮುಖ್ಯವಾಗಿ ತಮಿಳುನಾಡಿನಲ್ಲಿ ಚಲಾವಣೆಯಲ್ಲಿದೆ . ಕರ್ನಾಟಕದಲ್ಲಿಯೂ ಕೆಲವು ಭಾಗಗಳಲ್ಲಿ ಈ ಪದ್ಧತಿಯನ್ನು ಅನುಸರಿಸುತ್ತಾರೆ . ಈ ಸೌರವರ್ಷದ ಪ...