ಅದು ಮೇ 2016. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉತ್ತರ ಭಾಗದಲ್ಲಿರುವ ಗಣಗೂರಿನಲ್ಲಿ ನಾವು ತಂಗಿದ್ದೆವು. ಹುಲಿಯ ಬಲಿ ಪ್ರಾಣಿಗಳ ಸಾಂದ್ರತೆಯನ್ನು ಅಂದಾಜಿಸುವ ಸೀಳುದಾರಿ ಗಣತಿ ಸಮೀಕ್ಷೆ (Line Transect Survey) ನಡೆಯುತ್ತಿತ್ತು. ನನ್ನೊಂದಿಗೆ ಕೆಲವು ಫೀಲ್ಡ್ ಅಸಿಸ್ಟೆಂಟ್ಗಳು ಮತ್ತು ಸ್ವಯಂಸೇವಕರು ಇದ್ದರು. ಅದು ಮುಂಗಾರು ಪೂರ್ವದ ಮಳೆಯ ಸಮಯ. ಒಂದೊಂದು ದಿನ ಸಂಜೆ ಬೀಳುತ್ತಿದ್ದ ಹದವಾದ ಮಳೆಯಿಂದ ಕಾಡು ಹಸಿರಿನಿಂದ ಕಂಗೊಳಿಸುತ್ತಿತ್ತು. ಒದ್ದೆಯಾದ ಮಣ್ಣಿನ ವಾಸನೆ ಗಾಳಿಯಲ್ಲಿ ಹರಡಿಕೊಂಡಿತ್ತು. ಒಂದು ಮಧ್ಯಾಹ್ನ ಸುಮಾರು ಎರಡೂವರೆ ಗಂಟೆ. ಊಟ ಮುಗಿಸಿ, ಸಮೀಕ್ಷೆಗೆ ಹೊರಡಲು ಇನ್ನೂ ಸಮಯವಿದ್ದ ಕಾರಣ ಎಲ್ಲರೂ ಹರಟೆಯಲ್ಲಿ ತೊಡಗಿದ್ದೆವು. ನಾವು ಉಳಿದಿದ್ದ ಅರಣ್ಯ ಇಲಾಖೆಯ ಹಳೆಯ ಕಟ್ಟಡದ ಸ್ವಲ್ಪ ದೂರದಲ್ಲೇ ಒಂದು ಕೆರೆಯಿತ್ತು. ಕಟ್ಟಡದಿಂದ ಹೊರಬಂದರೆ ಕೆಲವು ಮೆಟ್ಟಿಲುಗಳು. ಅಲ್ಲಿಂದ ಒಂದು ಕಚ್ಚಾ ರಸ್ತೆ ಬಲಗಡೆಯಿಂದ ಬಂದು ಕಟ್ಟಡದ ಮುಂದೆ ಹಾದು, ಎಡಗಡೆಗೆ ಸಾಗಿ ಸ್ವಲ್ಪ ದೂರದಲ್ಲಿ ಸ್ವಲ್ಪ ಬಲಕ್ಕೆ ತಿರುಗಿ ಕೆರೆಯನ್ನು ಸೇರುತ್ತಿತ್ತು. ಆ ತಿರುವಿನ ಕಾರಣದಿಂದ ಕಟ್ಟಡದ ಮುಂದೆ ನಿಂತರೆ ಕೆರೆ ಕಾಣುತ್ತಿರಲಿಲ್ಲ. ಒಂದು ಕ್ಷಣ ನಮ್ಮ ಮಾತೆಲ್ಲವು ಸ್ತಬ್ದವಾಯಿತು. ಇದ್ದಕ್ಕಿದ್ದಂತೆ ಹುಲಿಯ ಕೂಗೊಂದು ಕೇಳಿಸಿದ್ದರಿಂದ ನಾವು ಮಾತನಾಡುವುದನ್ನು ನಿಲ್ಲಿಸಿದೆವು. ಅದು ಹುಲಿಯ ಘರ್ಜನೆಯಲ್ಲ. ಬೆದೆಗೆ ಬಂದ ಹೆಣ್ಣು ಹುಲಿ ಕಾಡ...
’ಕಲರವ’ ಒಂದು ಪುಟ್ಟ ಗುಂಪು. ಪಕ್ಷಿವೀಕ್ಷಣೆ, ಪರಿಸರ ಸಂರಕ್ಷಣೆ, ಖಗೋಳ, ಫೋಟೊಗ್ರಫಿ, ಸೈಕ್ಲಿಂಗ್, ಸಿನಿಮಾ, ಪ್ರವಾಸ, ಹೀಗೆ ಹಲವಾರು ಚಟುವಟಿಕೆಗಳು ಮತ್ತು ಚರ್ಚೆಯ ವೇದಿಕೆ. ಸಮಾನ ಅಭಿರುಚಿಯ ಗೆಳೆಯರ ಓದು, ಓಡಾಟದ ವಿನಿಮಯ ಮತ್ತು ಆ ಮೂಲಕ ಒಡನಾಟ ಈ ಕಲರವ